ವಿಜಯ ಸಂಘರ್ಷ
ಶಿವಮೊಗ್ಗ: ಪ್ರಾಥಮಿಕ 1ರಿಂದ 5ನೇ ತರಗತಿವರೆಗೆ ಶಾಲೆ ಆರಂಭಿಸುವ ಕುರಿತು ಶೀಘ್ರವೇ ತಾಂತ್ರಿಕ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, 6ರಿಂದ 8ನೇ ತರಗತಿಗಳನ್ನು ನಮ್ಮ ಶಿಕ್ಷಕರು ಚೆನ್ನಾಗಿ ನಡೆಸುತ್ತಿದ್ದಾರೆ.
ಶಾಲೆ ತೆರೆಯುವ ಬಗ್ಗೆ ತಾಂತ್ರಿಕ ಸಮಿತಿ ಮುಂದೆ ಚರ್ಚಿಸಿ ಸಭೆ ಅನುಮತಿ ನೀಡಿದ ಬಳಿಕ ಆರಂಭಿಸುತ್ತೇವೆ ಎಂದರು.
ಪಠ್ಯ ಕಡಿತಗೊಳಿಸುವ ಕುರಿತು ಬ್ರಿಡ್ಜ್ ಕೋರ್ಸ್ ಮಾಡುತ್ತಿದ್ದೇವೆ. ಸಿಲಬಸ್ ಪೂರ್ತಿ ಮಾಡಿದರೆ ಮಕ್ಕಳಿಗೆ ಲಾಭ. ಮಕ್ಕಳು ಒಂದೂವರೆ ವರ್ಷ ಶಾಲೆಯಿಂದ ದೂರ ಉಳಿದಿದ್ದಾರೆ. ಅದನ್ನು ಬ್ರಿಡ್ಜ್ ಕೋರ್ಸ್ನಲ್ಲಿ ಪೂರ್ಣಗೊಳಿಸಬೇಕಿದೆ.ಈ ವರ್ಷವೂ ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ತೊಂದರೆಯಾಗುತ್ತದೆ. ಹೀಗಾಗಿ ಆ ಬಗ್ಗೆ ಇನ್ನು ಯಾವ ನಿರ್ಣಯ ಕೈಗೊಂಡಿಲ್ಲ ಎಂದು ಹೇಳಿದರು.
ಕೇರಳದಲ್ಲಿ ಕರೊನಾ ಹೆಚ್ಚಾಗುತ್ತಿದೆ. ಮಂಗಳೂರು, ಉಡುಪಿಯಲ್ಲಿ ಕಡಿಮೆ ಆಗುತ್ತಿದೆ. ಶಾಲೆ ಪ್ರಾರಂಭ ಮಾಡಿರುವ ಸರ್ಕಾರಕ್ಕೆ ಕರೊನಾ ಹೆಚ್ಚಳವಾದರೆ ತಕ್ಷಣ ನಿಲ್ಲಿಸುವ ಅವಕಾಶ ಇದೆ. ಈ ಬಗ್ಗೆ ಕರೊನಾ ಹೆಚ್ಚಾದ ಸಂದರ್ಭದಲ್ಲಿ ನಿರ್ಣಯ ಕೈಗೊಳ್ಳುತ್ತೇವೆ ಎಂದರು.
ವಿಜಯ ಸಂಘರ್ಷಕ್ಕೆ ಸುದ್ದಿ ನೀಡಲು ಕರೆ ಮಾಡಿ +91 9743225795
