ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಒಳಪಟ್ಟ ಸರ್ವೆ ನಂ.39ರ ಬಳಸೊಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಮಂಗಳವಾರ ನಡೆಯಿತು.
ಸರ್ಕಾರದ ಆದೇಶದಂತೆ ಸುಮಾರು 10 ಎಕರೆ ವಿಸ್ತೀರ್ಣ ಹೊಂದಿರುವ ಬಳಸೊಕೆರೆ ತೆರವು ಕಾರ್ಯಾಚರಣೆ ಗ್ರಾಮ ಪಂಚಾಯಿತಿ ಆಡಳಿತ ಪೊಲೀಸರ ನೆರವಿನೊಂದಿಗೆ
ಕೈಗೊಂಡಿತು.
ತಾಲೂಕಿನ ಬಹುತೇಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇನ್ನೂ ಬಹಳಷ್ಟು ಕೆರೆಗಳು ಒತ್ತುವರಿ ಗೊಂಡಿದ್ದು, ತೆರವು ಕಾರ್ಯಾಚರಣೆ ಕೈಗೊಳ್ಳಬೇಕಾಗಿದೆ. ಈ ನಿಟ್ಟಿನಲ್ಲಿ ಆಯಾ ಗ್ರಾಪಂಗಳು ಹೆಚ್ಚಿನ ಆಸಕ್ತಿವಹಿಸಬೇಕಾಗಿದೆ.
ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿ. ಆನಂದ, ಉಪಾಧ್ಯಕ್ಷ ಕೆ.ವಿ ಧನಂ ಜಯ(ಧಾನು), ಸದಸ್ಯ ಉಮೇಶ್, ಕಾರ್ಯದರ್ಶಿ ಸವಿತ ಸೇರಿದಂತೆ ಇನ್ನಿತರರು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Tags
ಭದ್ರಾವತಿ ವರದಿ