ವಿಜಯ ಸಂಘರ್ಷ ನ್ಯೂಸ್
ಹೊಸನಗರ: ಕೊಡಚಾದ್ರಿ ಸಮೀಪ ಜೀಪ್ ಮತ್ತು ಟೆಂಪೊ ಟ್ರಾವಲರ್ ಡಿಕ್ಕಿಯಾಗಿದ್ದು 8 ಮಂದಿ ಗಾಯಗೊಂಡಿದ್ದಾರೆ. ಈ ಪೈಕಿ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಹೊಸನಗರ ನಿಟ್ಟೂರು ಸಮೀಪದ ಮರಕುಟಿಗ ಬಳಿ ಗುರುವಾರ ಅಪಘಾತ ಸಂಭವಿಸಿದೆ. ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್, ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿ.ಟಿ. ವಾಹನ ಮುಖಾಮುಖಿ ಡಿಕ್ಕಿಯಾಗಿವೆ. ಜೀಪ್ನಲ್ಲಿದ್ದ 8 ಮಂದಿ ಪೈಕಿ ಮೂವರು ಗಂಭೀರ ಗಾಯಗೊಂಡಿದ್ದಾರೆ. ಇವರೆಲ್ಲ ಕೇರಳದಿಂದ ಬಂದಿದ್ದ ಪ್ರವಾಸಿಗರು ಎಂದು ತಿಳಿದು ಬಂದಿದೆ.
ಗಾಯಾಳುಗಳನ್ನು ಕುಂದಾಪುರದ ಆಸ್ಪತ್ರೆಗೆ ರವಾನಿಸಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.