ವಿಜಯ ಸಂಘರ್ಷ ನ್ಯೂಸ್
ಬೆಂಗಳೂರು: ಬೇಸಿಗೆ ರಜಾ ಋತುವು ವೇಗವಾಗಿ ಬರುತ್ತಿದ್ದು ನಾವು ಶಾಲಾ ರಜಾದಿನಗಳು ಮತ್ತು ಕುಟುಂಬದ ಜನರನ್ನು ಉದ್ದೇಶಿಸಿ ಹೊಸ ಉತ್ಪನ್ನ ಗಳನ್ನು ಬಿಡುಗಡೆ ಮಾಡಲಿದ್ದೇವೆ” ಎಂದು ಪ್ರವಾಸೋದ್ಯಮ ಸಚಿವ ಪಿ.ಎ.ಮೊಹಮ್ಮದ್ ರಿಯಾಸ್ ಹೇಳಿದರು.
ಈ ಸಮಯದಲ್ಲಿ ಅಭಿಯಾನವು ನಿರ್ದಿಷ್ಟ ವಾಗಿ ಉತ್ತರ ಕೇರಳದ ಬೇಕಲ್, ವಯನಾಡ್ ಮತ್ತು ಕೋಳಿ ಕ್ಕೋಡ್ ಗಳಿಗೆ ಆದ್ಯತೆ ನೀಡಿದ್ದಲ್ಲದೆ ಮೂಲಸೌಕರ್ಯಗಳ ಕಡಿಮೆ ಅರಿವಿನ ತಾಣಗಳನ್ನೂ ಸೇರ್ಪಡೆ ಮಾಡಿದ್ದೇವೆ ಎಂದರು.
ಈ ಅಭಿಯಾನವು ಕೇರಳವನ್ನು ತನ್ನ ಅಸಂಖ್ಯ ಛಾಯೆಗಳಲ್ಲಿ ಪ್ರದರ್ಶಿಸ ಲಿದ್ದು ಇದು ಈ ತಾಣಗಳಿಗೆ ಮತ್ತು ರಾಜ್ಯವು ಒದಗಿಸುವ ವಿಶಿಷ್ಟ ಪ್ರವಾಸೋದ್ಯಮ ಉತ್ಪನ್ನಗಳಿಗ ವಿಸಿಬಿಲಿಟಿ ಹೆಚ್ಚಿಸುವ ಆವಿಷ್ಕಾರಕ ಉತ್ತೇಜನ ಕಾರ್ಯತಂತ್ರವಾಗಿದೆ ಅಲ್ಲದೆ ಪ್ರಮುಖ ಮೂಲ ನಗರ ಗಳಿಂದ ಸಂಭವನೀಯ ಸಂದರ್ಶಕ ರನ್ನು ನೇರವಾಗಿ ಸಂಪರ್ಕಿಸುತ್ತದೆ ಎಂದರು.
ಕೇರಳ ರಾಜ್ಯ ಕಾರ್ಯದರ್ಶಿ ಬಿಜು ಕೆ. ಪ್ರವಾಸಿಗರನ್ನು ಸೆಳೆಯುವ ಹೊಸ ಆಕರ್ಷಣೆ ಗಳಲ್ಲಿ ಹೆಲಿ-ಟೂರಿಸಂ ಮತ್ತು ಸಮುದ್ರದ ವಿಮಾನದ ಉಪಕ್ರಮಗಳಿದ್ದು ಅವು ರಾಜ್ಯದಲ್ಲಿನ ತಾಣಗಳನ್ನು ಸಂಪರ್ಕಿತ ಮತ್ತು ಸುಲಭವಾಗಿ ಲಭ್ಯವಾಗುವಂತೆ ಮಾಡುತ್ತವೆ ಎಂದು ಹೇಳಿದರು.
ಹೊಸ ಉತ್ಪನ್ನಗಳೊಂದಿಗೆ ರಾಜ್ಯದ ಪ್ರಮುಖ ಸಂಪತ್ತುಗಳಾದ ಕಡಲ ತೀರಗಳು, ಗಿರಿಧಾಮಗಳು, ದೋಣಿ ಮನೆಗಳು ಮತ್ತು ಹಿನ್ನೀರಿನ ವಲಯವು ಸಂದರ್ಶಕರ ಅನುಭವದ ಪೂರ್ಣತೆ ಯನ್ನು ಎತ್ತರಿಸಲಿದೆ ಎಂದರು.
ಕೇರಳ ರಾಜ್ಯದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಖಾ ಸುರೇಂದ್ರನ್ತನ್ನ ಪ್ರಶಾಂತ ನೈಸರ್ಗಿಕ ಸೌಂದರ್ಯ, ಉಜ್ವಲ ಸಂಸ್ಕೃತಿ ಮತ್ತು ಶ್ರೀಮಂತ ಪರಂಪರೆಗೆ ಖ್ಯಾತಿ ಪಡೆದಿರುವ ಕೇರಳ ತನ್ನ ಸಂದರ್ಶಕ ರಿಗೆ ಸಾಂಸ್ಕೃತಿಕ ಸಂತೋಷ ಮತ್ತು ಸಾಹಿತ್ಯಿಕ ಕಾರ್ಯಕ್ರಮಗಳ ಮೂಲಕ ರಂಜಿಸುತ್ತದೆ. ರಾಜಧಾನಿ ನಗರವು ಫೆ: 15ರಿಂದ 21ರವರೆಗೆ ಕನಕಕ್ಕುನ್ನು ಪ್ಯಾಲೇಸ್ ನಲ್ಲಿ ನಿಶಾಗಂಧಿ ನೃತ್ಯೋತ್ಸವ ಆಯೋಜಿಸಿದ್ದು ಅದರಲ್ಲಿ ಭಾರತದ ಮೂಲೆ ಮೂಲೆಯ ಖ್ಯಾತ ನೃತ್ಯಗಾರರು ಮೋಹಿನಿಯಾಟ್ಟಂ, ಕಥಕ್, ಕೂಚಿಪುಡಿ, ಭರತನಾಟ್ಯ ಮತ್ತು ಮಣಿಪುರಿ ನೃತ್ಯಗಳನ್ನು ಪ್ರದರ್ಶಿಸಲಿದ್ದಾರೆ” ಎಂದರು.
ಕೇರಳ ಲಿಟರೇಚರ್ ಫೆಸ್ಟಿವಲ್ (ಕೆ.ಎಲ್.ಎಫ್.) ಗಮನಾರ್ಹ ವಾರ್ಷಿಕ ಕಾರ್ಯಕ್ರಮವಾಗಿದ್ದು ಜನವರಿ 23-26ರವರೆಗೆ ಕೋಳಿಕ್ಕೋಡ್ ಸಮುದ್ರತೀರದಲ್ಲಿ ನಡೆಯುತ್ತದೆ. ಈ ಉತ್ಸವವು ಸಮಾಜದ ವೈವಿಧ್ಯಮಯ ಹಿನ್ನೆಲೆಯ ವಿಸ್ತಾರ ಶ್ರೇಣಿಯ ಲೇಖಕರು, ಕಲಾವಿದರು, ನಟರು, ಸೆಲೆಬ್ರಿಟಿಗಳು, ಚಿಂತಕರು ಮತ್ತು ಆಕ್ಟಿವಿಸ್ಟ್ ಗಳನ್ನು ಒಗ್ಗೂಡಿಸಲಿದ್ದು ಓದುಗರು ಮತ್ತು ಲೇಖಕರ ನಡುವೆ ಸಂಪರ್ಕ ವೃದ್ಧಿಸಲಿದೆ. ಕೆ.ಎಲ್.ಎಫ್. 12ಕ್ಕೂ ಹೆಚ್ಚು ದೇಶಗಳ 400ಕ್ಕೂ ಹೆಚ್ಚು ಭಾಷಣಕಾರರನ್ನು ಹೊಂದಿದ್ದು ಕೋಳಿಕ್ಕೋಡ್ ನಗರದ ಐದು ಸ್ಥಳಗಳಲ್ಲಿ 200 ಅಧಿವೇಶನಗಳನ್ನು ನಡೆಯುತ್ತವೆ.
ಐಷಾರಾಮ ಮತ್ತು ವಿರಾಮವನ್ನು ಸಂಯೋಜಿಸುವ ಕೇರಳವು ಡೆಸ್ಟಿನೇಷನ್ ವೆಡ್ಡಿಂಗ್ ಮತ್ತು ಎಂಐಸಿಇ (ಮೀಟಿಂಗ್ಸ್, ಇನ್ಸೆಂಟಿವ್ಸ್, ಕಾನ್ಫರೆನ್ಸಸ್ ಅಂಡ್ ಎಕ್ಸಿಬಿಷನ್ಸ್) ಕಾರ್ಯಕ್ರಮಗಳ ಆದ್ಯತೆಯ ಕೇಂದ್ರವಾಗುತ್ತಿದೆ. ದಾಖಲೆಗಳ ಪ್ರಕಾರ ಹೆಚ್ಚು ಹೆಚ್ಚು ಭಾರತೀಯರು ಮತ್ತು ವಿದೇಶಿಯರು ಕೇರಳಕ್ಕೆ ಭೇಟಿ ನೀಡುತ್ತಿದ್ದಾರೆ. ತನ್ನ ಅತ್ಯಾಕರ್ಷಕ ಪ್ರದೇಶಗಳು, ವಿಶ್ವಮಟ್ಟದ ಸೌಲಭ್ಯಗಳು ಮತ್ತು ಸಂಪ್ರದಾಯ ಹಾಗೂ ಆಧುನಿಕತೆಯ ಸರಿಸಾಟಿ ಇರದ ಸಂಯೋಜನೆಯಿಂದ ಈ ರಾಜ್ಯವು ವಿಶಿಷ್ಟ ಅನುಭವ ನಿರೀಕ್ಷಿಸುವ ಈವೆಂಟ್ ಪ್ಲಾನರ್ ಗಳು, ದಂಪತಿಗಳು ಮತ್ತು ಕಾರ್ಪೊರೇಟ್ ಗ್ರಾಹಕರನ್ನು ಸೆಳೆಯುತ್ತಿದೆ ಎಂದು ಕೇರಳ ಸರ್ಕಾರದ ಪ್ರವಾಸೋದ್ಯಮ ಇಲಾಖೆಯ ನಿರ್ದೇಶಕಿ ಸಿಖಾ ಸುರೇಂದ್ರನ್ ಹೇಳಿದರು.
ಬೇಸಿಗೆಯ ರಜಾದಿನದಲ್ಲಿ ಸ್ಥಳೀಯ ಪ್ರವಾಸಿಗರ ಸಂಖ್ಯೆಯಲ್ಲಿ ಹೆಚ್ಚಳದಿಂದ ಕೇರಳ ಟೂರಿಸಂ ಪ್ರವಾಸದ ವ್ಯಾಪಾರ ಜಾಲ ನಿರ್ಮಾಣದ ಕಾರ್ಯಕ್ರಮ ಗಳನ್ನು ಆಯೋಜಿಸಿದ್ದು ಬಿ2ಬಿ ರೋಡ್ ಶೋಗಳಿಂದ ವಿಸ್ತಾರ ಗ್ರಾಹಕರಿಗೆ ಹೊಸ ಉತ್ಪನ್ನಗಳನ್ನು ಬಿಡುಗಡೆ ಮಾಡುವುದನ್ನು ಒಳಗೊಂಡಿದ್ದು ಇದಲ್ಲದೆ ವ್ಯಾಪಾರ ಮೇಳಗಳಲ್ಲಿ ಭಾಗವಹಿಸಲಿದೆ.
ಜ: 21ರಂದು ಹೈದರಾಬಾದ್ ನಲ್ಲಿ ಬಿ2ಬಿ ಟ್ರಾವೆಲ್ ಮೀಟ್ ಪ್ರಾರಂಭಿಸಿದ್ದು ಈ ಅಭಿಯಾನವು ಜನವರಿ- ಮಾರ್ಚ್ ಅವಧಿಯಲ್ಲಿ ಅಹಮದಾಬಾದ್, ಚಂಡೀಗಢ, ದೆಹಲಿ, ಜೈಪುರ, ಚೆನ್ನೈ ಮತ್ತು ಕೊಲ್ಕತಾಗಳಲ್ಲಿ ಬಿ2ಬಿ ಸಭೆಗಳ ಸರಣಿ ಕಾಣಲಿದ್ದು ಹಲವಾರು ಪರಿವರ್ತ ನೀಯ ಉಪಕ್ರಮಗಳು ಮತ್ತು ಜನಪ್ರಿಯ ತಾಣಗಳನ್ನು ಪ್ರವಾಸೋದ್ಯಮ ಮತ್ತು ಆತಿಥ್ಯ ಕ್ಷೇತ್ರದ ಮುಂಚೂಣಿಯ ಪಾಲುದಾರರ ಮುಂದೆ ಪ್ರದರ್ಶಿಸಲಿದೆ ಎಂದರು.
Tags
ಬೆಂಗಳೂರು ವರದಿ