ಪತ್ರಿಕಾ ವಿತರಕರ ಸೇವೆ ಅತ್ಯಂತ ಸ್ಮರಣೀಯ: ಅ.ನಾ.ವಿಜಯೇಂದ್ರ ರಾವ್

ವಿಜಯ ಸಂಘರ್ಷ ನ್ಯೂಸ್ 
ಶಿವಮೊಗ್ಗ: ಪತ್ರಿಕಾರಂಗ ಇಂದು ನಮ್ಮ ದೇಶದಲ್ಲಿ ಪ್ರಮುಖ ಪಾತ್ರ ವಹಿಸುತ್ತಿರುವ ಒಂದು ಉದ್ಯಮ ವಾಗಿದೆ.ಇದರಲ್ಲಿ ಪತ್ರಿಕಾ ವಿತರಕರ ಸೇವೇಯೂ ಕೂಡ ಅತ್ಯಂತ ಸ್ಮರಣೀಯ ಎಂದು ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿಯ ಪ್ರಧಾನ ಕಾರ್ಯದರ್ಶಿ ಅ.ನಾ.ವಿಜಯೇಂದ್ರ ರಾವ್ ತಿಳಿಸಿದರು.

ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟ, ನಗರದ ಸಾಹಸ ಮತ್ತು ಸಂಸ್ಕೃತಿ ಅಕಾಡೆಮಿ, ಮಥುರ ಪ್ಯಾರಡೈಸ್ ರಜತೋತ್ಸವ ಸಮಿತಿ , ಆರೋಗ್ಯ ಭಾರತಿ ಶಿವಮೊಗ್ಗ ಹಾಗೂ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಸೂಪರ್ ತೀರ್ಥಹಳ್ಳಿ ಸ್ಪೆಷಾಲಿಟಿ ಕ್ಯಾನ್ಸರ್ ಅಸ್ಪತ್ರೆ ಇವರ ಸಹಯೋಗದಲ್ಲಿ ಪತ್ರಿಕಾ ವಿತರಕರ ಒಕ್ಕೂಟ ಜಿಲ್ಲಾ ಘಟಕದ ಕುಟುಂಬದ ಸದಸ್ಯರಿಗೆ ಕವಲೇದುರ್ಗ ಚಾರಣ, ಕುಪ್ಪಳ್ಳಿಯ ಕವಿಶೈಲ ಮತ್ತು ಶೃಂಗೇರಿಗೆ ಪ್ರವಾಸ ಮತ್ತು ಸಾಮಾನ್ಯ ಆರೋಗ್ಯ ಮತ್ತು ಕ್ಯಾನ್ಸರ್ ಕುರಿತು ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಶಿವಮೊಗ್ಗ ಜಿಲ್ಲಾ ಪತ್ರಿಕಾ ವಿತರಕರ ಒಕ್ಕೂಟದ ಗೌರವಾಧ್ಯಕ್ಷ ಶಿಕಾರಿಪುರ ಹುಲಿಗಿ ಕೃಷ್ಣ ಮಾತನಾಡಿ ಎಮ್.ಐ.ಓ ಆಸ್ಪತ್ರೆ ಯವರು ಕ್ಯಾನ್ಸರ್ ಮುಕ್ತ ಸಮಾಜಕ್ಕೆ ತನ್ನದೇ ಆದ ತಂಡ ದೊಂದಿಗೆ ಎಲ್ಲಾ ತಾಲೂಕಿನ ಪ್ರಮುಖ ಕೇಂದ್ರಗಳಲ್ಲಿ ಕ್ಯಾನ್ಸರ್ ಜಾಗೃತಿ ಅರಿವು ಮೂಡಿಸುತ್ತಿರುವುದು ಉತ್ತಮ ಕಾರ್ಯವೆಂದರು. 

ಕ್ಯಾನ್ಸರ್ ಬಗ್ಗೆ ಭಯ ಬೇಡ, ಅದೊಂದು ಗುಣ ಪಡಿಸಬಹುದಾದ ಕಾಯಿಲೆ, ಆದರೆ ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆದು ಕೊಂಡರೆ ಆರೋಗ್ಯದಲ್ಲಿ ಯಾವುದೇ ತೊಂದರೆ ಆಗದಂತೆ ಜೀವನ ನಡೆಸಬಹುದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಹಲವಾರು ವರ್ಷಗಳಿಂದ ನಿಸ್ವಾರ್ಥವಾಗಿ ಪತ್ರಿಕಾ ವಿತರಣೆಯಲ್ಲಿ ಕಾರ್ಯ ನಿರ್ವಹಿಸುತ್ತಿ ರುವ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಜಿಲ್ಲಾಧ್ಯಕ್ಷ ಎನ್. ಮಾಲತೇಶ್ ಇವರಿಗೆ ಮಂಗಳೂರು ಇನ್ಸ್ಟಿಟ್ಯೂಟ್ ಆಫ್ ಆಂಕಾಲಜಿ ಸೂಪರ್ ಸ್ಪೆಷಾಲಿಟಿ ಕ್ಯಾನ್ಸರ್ ಅಸ್ಪತ್ರೆ ತೀರ್ಥಹಳ್ಳಿ ಇವರ ವತಿಯಿಂದ ಸನ್ಮಾನಿಸಲಾಯಿತು.

ಇದೇ ಸಂದರ್ಭದಲ್ಲಿ ಪತ್ರಿಕಾ ವಿತರಕರರಾದ ದೇವರಾಜ್ ಶೆಟ್ರು, ದುರ್ಘೋಜಿ, ಪ್ರಾಣೇಶ್, ಶಿಕಾರಿಪುರ ಶಿವಯ್ಯ, ಡಿಟಿಪಿ ಆಪರೇಟರ್ ರಾದ ರಾಜೇಶ್ವರಿ,ಗೀತಾ,ಶೋಭಾ, ಬಾವಿಕ ಮುಂತಾದವರು ಭಾಗವಹಿಸಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು