ಕೂಲಿ ಕಾರ್ಮಿಕರ ಮೇಲೆ ಹಲ್ಲೆ:ಕಾಂಗ್ರೆಸ್ ಪರಿಶಿಷ್ಟ ವಿಭಾಗದ ಮುಖಂಡರ ಖಂಡನೆ


ವಿಜಯ ಸಂಘರ್ಷ ನ್ಯೂಸ್ 
ವಿಜಯಪುರ : ಹೊರವಲಯದ ಇಟ್ಟಂಗಿ ಭಟ್ಟಿಯಲ್ಲಿ ಕೂಲಿ ಕಾರ್ಮಿಕರ ಮೇಲೆ ನಡೆದ ಮಾರಣಾಂತಿಕ ಹಲ್ಲೆ ಗೊಳಗಾದ ಕಾರ್ಮಿಕರನ್ನು ಜಿಲ್ಲಾಸ್ಪತ್ರೆ ಯಲ್ಲಿ ವಿಜಯಪುರ ಜಿಲ್ಲಾ ಪರಿಶಿಷ್ಟ ಜಾತಿ ಘಟಕದ ವತಿಯಿಂದ ಭೇಟಿ ಯಾಗಿ ಸಾಂತ್ವನ ಹೇಳಲಾಯಿತು.

ಕಾಂಗ್ರೆಸ್ ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ರಮೇಶ ಗುಬ್ಬೇವಾಡ ಮಾತನಾಡಿ, ಅಮಾಯಕ ಕಾರ್ಮಿಕರ ಮೇಲೆ ದೌರ್ಜನ್ಯ ಎಸಗಿರುವ ಇಟ್ಟಂಗಿ ಭಟ್ಟಿ ಮಾಲಿಕನಿಗೆ ಗಡಿಪಾರು ಮಾಡಬೇಕು. ಅವನ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಬೇಕು. ಈ ರೀತಿಯ ಘಟನೆಗಳು ಮರುಕಳಿಸ ದಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳ ಬೇಕು ಕಾರ್ಮಿಕರಿಗೆ ಸೂಕ್ತ ರಕ್ಷಣೆ ಯನ್ನು ಒದಗಿಸಬೇಕೆಂದು ಆಗ್ರಹಿಸಿದರು.

ಜಿಲ್ಲಾ ಉಪಾಧ್ಯಕ್ಷ ಸುಭಾಷ ಕಾಲೇಬಾಗ ಮಾತನಾಡಿ, ಹಲ್ಲೆಗೊಳ ಗಾದ ದಲಿತ ಕಾರ್ಮಿಕರಿಗೆ ಸೂಕ್ತ ಚಿಕಿತ್ಸೆ ನೀಡಬೇಕು. ಹಲ್ಲೆಯಿಂದ ತೀವ್ರವಾಗಿ ಗಾಯಗೊಂಡಿರುವ ಕಾರ್ಮಿಕರಿಗೆ ಸರಕಾರ ಸೂಕ್ತ ಪರಿಹಾರ ಹಾಗೂ ಕಾರ್ಮಿಕರ ಕುಟಂಬಕ್ಕೆ ಸರಕಾರ ಜಮೀನು ಮಂಜೂರು ಮಾಡಬೇಕು. ಅವರಿಗೆ ಸೂಕ್ತ ರಕ್ಷಣೆಯನ್ನು ನೀಡಬೇಕು ಎಂದು ಆಗ್ರಹಪಡಿಸಿದರು.

ಜಿಲ್ಲಾ ಮಾಧ್ಯಮ ವಕ್ತಾರ ಸಂಜೀವ ಚವ್ಹಾಣ ಮಾತನಾಡಿ, ಹಲ್ಲೆ ನಡೆಸಿ ದವರು ಯಾವುದೇ ಧರ್ಮ, ಜಾತಿಗೆ ಸೇರಿದರೂ ಕೂಡ ಅವರು ಮಾಡಿರುವದು ಖಂಡನೀಯವಾಗಿದೆ. ಮನುಷ್ಯತ್ವ ಇರುವ ಯಾರೇ ಆಗಲಿ ಇಂತಹ ಕೃತ್ಯಗಳನ್ನು ಸಹಿಸಿಕೊಳ್ಳುವು ದಿಲ್ಲ. ಆರೋಪಿಗಳಿಗೆ ತಕ್ಕ ಶಿಕ್ಷೆಯಾಗ ಬೇಕು. ನೊಂದ ಕಾರ್ಮಿಕರಿಗೆ ಸೂಕ್ತ ನ್ಯಾಯ ಒದಗಿಸಬೇಕೆಂದರು.

ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯೆ ಆರತಿ ಶಹಾಪೂರ, ರಾಘವೇಂದ್ರ ವಡವಡಗಿ, ಮಲ್ಲಿಕಾರ್ಜುನ ಮಡ್ಡಿಮನಿ, ಲಕ್ಷö್ಮಣ ಚಲವಾದಿ, ವಿಠ್ಠಲ ಸಂದಿಮನಿ, ಪರಶುರಾಮ ಪಾರಣ್ಣವರ, ಯಲ್ಲಪ್ಪ ಬಂಡೆನ್ನವರ,ಸತೀಶ ದೊಡಮನಿ, ಕೃಷ್ಣಾ ರತ್ನಾಕರ, ಸವಿತಾ ಧನರಾಜ, ನಾಗೇಂದ್ರಪ್ಪ ಮೇತ್ರಿ ಮುಂತಾದವರು ಹಾಜರಿದ್ದರು. 

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು