ಮಹಾನ್ ಶಿವಶರಣರ ಆದರ್ಶಗಳನ್ನ ಪ್ರತಿಯೊಬ್ಬರೂ ಪಾಲಿಸಬೇಕು: ಶ್ರೀನಿವಾಸ್

ವಿಜಯ ಸಂಘರ್ಷ ನ್ಯೂಸ್ 
ಕೆ.ಆರ್.ಪೇಟೆ: ಮಡಿವಾಳ ಮಾಚಿ ದೇವರು ಬಸವಣ್ಣನವರ ತತ್ವ, ಸಿದ್ಧಾಂತಗಳನ್ನು ಪಾಲಿಸುವುದರ ಮೂಲಕ ಸಮಾಜಕ್ಕೆ ಶುದ್ಧ ಕಾಯಕದ ಮಹತ್ವವನ್ನು ತಿಳಿಸಿಕೊಟ್ಟ ಮಹಾನ್ ಶಿವಶರಣರ ಆದರ್ಶಗಳನ್ನ ಪ್ರತಿ ಯೊಬ್ಬರೂ ಪಾಲಿಸಬೇಕು ಎಂದು ಪಾಂಡುಪುರ ಉಪ ವಿಭಾಗಾಧಿಕಾರಿ ಶ್ರೀನಿವಾಸ್ ತಿಳಿಸಿದರು.

ಪಟ್ಟಣದ ತಾಲ್ಲೂಕು ಆಡಳಿತ ಕಚೇರಿಯ ಸಭಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಆಯೋಜಿಸಿದ್ದ ಮಡಿವಾಳ ಮಾಚಿದೇವರ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

12ನೇ ಶತಮಾನದಲ್ಲಿ ಬಡ ಹಾಗೂ ಕೆಳ ವರ್ಗದ ಜನರು ಜಾತೀಯತೆ, ಅಸ್ಪಶ್ಯತೆ, ದುರ್ಬಲರ ಶೋಷಣೆ, ಮೂಢನಂಬಿಕೆ ಹಾಗೂ ಶಿಕ್ಷಣದಲ್ಲಿ ಅವಕಾಶ ಸಿಗದೆ ಅಸಮಾನತೆ ಯಿಂದ ತುಳಿತಕ್ಕೆ ಒಳಗಾಗಿದ್ದರು. ಸಮಾಜದಲ್ಲಿ ಅಸಮಾನತೆ ತೊಲಗಿಸಲು ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಇವರಲ್ಲಿ ಮಡಿವಾಳ ಮಾಚಿದೇವರು ಅಗ್ರಗಣ್ಯ ಸ್ಥಾನದಲ್ಲಿ ಒಬ್ಬರೆನಿಸಿದ್ದಾರೆ. ಇವರು ಕಾಯಕ ನಿಷ್ಠೆಗೆ ಹೆಚ್ಚಿನ ಒತ್ತು ನೀಡಿದ್ದರು. ಶೋಷಿತ ವರ್ಗದ ಏಳಿಗೆಗೆ ಶ್ರಮಿಸಿ ದ್ದರು. ಇವರು ರಚಿಸಿದ ವಚನಗಳು ಉತ್ತಮ ಸಮಾಜಕ್ಕೆ ದಾರಿದೀಪ ವಾಗಿವೆ. ಈ ದಿಸೆಯಲ್ಲಿ ಸಮುದಾಯದ ಜನರು ತಮ್ಮ ಮಕ್ಕಳನ್ನು ವಿದ್ಯಾವಂತ ರನ್ನಾಗಿ ಮಾಡುವುದರ ಜತೆಗೆ ಸಂಘಟಿತರಾಗಬೇಕಿದೆ. ಆಗ ಮಾತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದರು.

ಕಾರ್ಯಕ್ರಮ ನೇತೃತ್ವ ವಹಿಸಿ ಮಾತನಾಡಿದ ತಾಲ್ಲೂಕು ಮಡಿವಾಳ ಮಾಚಿದೇವರ ಸಂಘದ ಅಧ್ಯಕ್ಷ ಹಾಗೂ ಶೀಳನೆರೆ ಗ್ರಾ.ಪಂ ಅಧ್ಯಕ್ಷ ಶೀಳನೆರೆ ಸಿದ್ದೇಶ್,ಮಡಿವಾಳ ಮಾಚಿ ದೇವರು ಕಾಯಕದಲ್ಲಿ ನಿಷ್ಕಲ್ಮಶ ಹಾಗೂ ಪರಿಶುದ್ಧತೆ ಇರಬೇಕು ಎಂದು ಸಮಾಜಕ್ಕೆ ತೋರಿಸಿಕೊಟ್ಟರು. ಪ್ರತಿಯೊಬ್ಬರೂ ಇವರ ವಚಗಳನ್ನು ಓದುವುದರ ಮೂಲಕ ಆದರ್ಶಗಳನ್ನು ಪಾಲಿಸಿದಾಗ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಹಾಗೂ ತಾಲೂಕಿ ನಲ್ಲಿ ಮಡಿವಾಳ ಸಮುದಾಯಕ್ಕೆ ಸೇರಿದ ಸುಮಾರು 4 ಸಾವಿರ ಜನರಿದ್ದಾರೆ. ಸಮುದಾಯ ಭವನ ವಿಲ್ಲದೆ ಸಭೆ, ಸಮಾರಂಭ, ಮದುವೆ ಹಾಗೂ ಇನ್ನಿತರ ಕಾರ್ಯಗಳನ್ನು ಕೈಗೊಳ್ಳಲು ತುಂಬ ತೊಂದರೆ ಅನುಭವಿಸುವಂತಾಗಿದೆ ಎಂದು ಅಭಿಪ್ರಾಯಪಟ್ಟರು.

ತಹಸೀಲ್ದಾರ್ ಎಸ್.ಯು.ಡಾ: ಅಶೋಕ್ ಮಾತನಾಡಿ ಸರಕಾರ ಎಲ್ಲ ಸಮುದಾಯ ಮತ್ತು ಸಮಾಜದಲ್ಲಿ ಅನೇಕ ಬದಲಾವಣೆಗೆ ಕಾರಣವಾದ ಮಹಾನ್‌ ಪುರುಷರ ಜಯಂತಿ ಆಚರಿಸುತ್ತಿದೆ. ಸಮಾಜದಲ್ಲಿ ಬೇಧ-ಭಾವ ಇಲ್ಲದೆ ಒಂದೇ ರೀತಿಯಲ್ಲಿ ಬದುಕಲು ಹಕ್ಕಿದೆ ಎಂಬ ಪ್ರತಿಪಾದನೆ ಮಾಡಿದ ಶರಣರ ತತ್ವಗಳನ್ನು ನಾವು ಜೀವನದಲ್ಲಿ ಅಳವಡಿಸಿ ಕೊಳ್ಳುವ ಮೂಲಕ ಅವರಿಗೆ ನಿಜವಾದ ಗೌರವ ಸಲ್ಲಿಸಬೇಕು ಎಂದರು.

ಈ ಸಂದರ್ಭದಲ್ಲಿ ಮಡಿವಾಳ ಸಂಘದ ಕಾರ್ಯದರ್ಶಿ ಸುಬ್ರಮಣ್ಯ, ಖಜಾಂಚಿ ಮಂಜು,ಮಹಿಳೆ ತಾ.ಅಧ್ಯಕ್ಷೆ ಮಣಿ, ಚೌಡೇನಹಳ್ಳಿ ಲತಾ ಕೇಶವ ,ಶಿಕ್ಷಕ ಪಿ.ಜೆ ವೆಂಕಟರಮ್,ಗ್ರೇಡ್ -2 ತಹಸೀಲ್ದಾರ್ ಲೋಕೇಶ್, ಕಸಬಾ ಆರ್.ಐ ಜ್ಞಾನೇಶ್, ಹೊಸಹೊಳಲು ಕೃಷಿ ಪತ್ತಿನ ಸಹಕಾರ ಸಂಫದ ಅಧ್ಯಕ್ಷ ಹೆಚ್.ಎಸ್ ನಾಗರಾಜ್, ನಯನಜ ಕ್ಷತ್ರಿಯ ತಾಲ್ಲೂಕು ಅಧ್ಯಕ್ಷ ಎಂ ಶಿವಪ್ಪ,ವೆಂಕಟೇಶ್, ಹರೀಶ್, ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

(✍️ಸುದ್ದಿಯೊಂದಿಗೆ ಮನು ಮಾಕವಳ್ಳಿ ಕೆ ಆರ್ ಪೇಟೆ)

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು