ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ಮಹಾ ಕುಂಭಮೇಳ ದಲ್ಲಿ ಕೇಂದ್ರ ಸರ್ಕಾರದ ವತಿಯಿಂದ ಆಯೋಜಿಸಲಾ ಗಿರುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಅಂತರಾಷ್ಟ್ರೀಯ ಜಾನಪದ ಕಲಾವಿದ ಗಿರೀಶ್ ಕುಮಾರ್ ಮತ್ತು ಸಂಗಡಿಗರ ಡೊಳ್ಳು ಕುಣಿತ ತಂಡ ರಾಜ್ಯವನ್ನು ಪ್ರತಿನಿಧಿಸಿ ಉತ್ತಮ ಪ್ರದರ್ಶನ ನೀಡುವ ಮೂಲಕ ಮೆಚ್ಚುಗೆಗೆ ಪಾತ್ರವಾಗಿದೆ.
ತಾಲೂಕಿನ ಸುಲ್ತಾನ್ ಮಟ್ಟಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಶಿಕ್ಷಕ, ಜಾನಪದ ಕಲಾವಿದ ಎಂ.ಆರ್ ರೇವಣಪ್ಪ ನೇತೃತ್ವದಲ್ಲಿ ಒಟ್ಟು 16 ಜನರ ತಂಡ ರಾಜ್ಯವನ್ನು ಪ್ರತಿನಿಧಿ ಸಿತ್ತು. ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರಶಂಸೆಗೆ ಪಾತ್ರವಾಗಿದೆ.
ಹೊಸನಗರ ಮಾದಾಪುರ ಗ್ರಾಮದ ಶ್ರೀ ಶನಿಪರಮೇಶ್ವರ ಯುವಕ ಸಂಘದ ಜಾನಪದ ಕಲಾವಿದರಾದ ಗಿರೀಶ್ ಕುಮಾರ್,ಎಂ.ಎಸ್.ಸೋಮ ಶೇಖರ್, ಎಂ.ಎಸ್ ಮಂಜುನಾಥ್, ಎಂ.ಎಸ್ ದೇವರಾಜ್, ಎಂ.ಎಂ ಹುಚ್ಚರಾಯಪ್ಪ, ಎ.ವಿ ಚಂದ್ರಪ್ಪ, ಎಂ.ಡಿ ಲಕ್ಷ್ಮಣಪ್ಪ, ಎಂ.ಎಲ್ ಸುಧೀರ್ ಕುಮಾರ್, ಹರೀಶ್ ಕುಮಾರ್, ಎಂ.ಪಿ ತ್ಯಾಗರಾಜ್, ಎಂ.ಎಸ್ ಮಂಜುನಾಥ್, ಎಂ.ಬಿ ವಿನಯ್, ಎಂ.ಬಿ ಪ್ರಶಾಂತ್, ಎಂ.ಬಿ ದೇವರಾಜ್, ನಿಸ್ಸಾರ್ ಖಾನ್ ಕೆಂಚಾಯಿಕೊಪ್ಪ ಮತ್ತು ಎಂ.ಆರ್ ರೇವಣಪ್ಪ ಸೇರಿದಂತೆ ಒಟ್ಟು 16 ಜನರ ತಂಡ ರಾಜ್ಯವನ್ನು ಪ್ರತಿನಿಧಿಸಿತ್ತು. ಉತ್ತಮ ಪ್ರದರ್ಶನ ನೀಡುವ ಮೂಲಕ ಪ್ರಶಂಸೆಗೆ ಪಾತ್ರವಾಗಿದೆ.
ಈ ತಂಡ ಡೊಳ್ಳು ಕುಣಿತ ಮಾತ್ರ ವಲ್ಲದೆ ಜಾನಪದ ಕಲಾ ಪ್ರಕಾರಗಳಾದ ಸುಗ್ಗಿ ಕುಣಿತ, ಕೋಲಾಟ, ಗೀಗಿ ಪದ, ಲಾವಣಿ, ಭಜನೆ ಮತ್ತು ಸಣ್ಣಾಟ ನಿರಂತರವಾಗಿ ಮಾಡಿ ಕೊಂಡು ಬಂದಿದ್ದು, ರಾಜ್ಯದ ಪ್ರಮುಖ ಜಾನಪದ ಕಲಾತಂಡಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ.
Tags
ಭದ್ರಾವತಿ ವರದಿ