ವಿವಿಧ ಕ್ಷೇತ್ರದ ಸಾಧಕರಿಗೆ ರೋಟರಿ ಸೆಂಟ್ರಲ್‌ನಿಂದ ಸನ್ಮಾನ

ವಿಜಯ ಸಂಘರ್ಷ 
ಶಿವಮೊಗ್ಗ: ಸಾಧಕರನ್ನು ಗುರುತಿಸಿ ಗೌರವಿಸುವುದರಿಂದ ಸಮಾಜದ ಇತರರಿಗೂ ಪ್ರೇರಣೆ ದೊರಕುತ್ತದೆ ಎಂದು ರೋಟರಿ ಜಿಲ್ಲಾ ಗವರ್ನರ್ ದೇವ್ ಆನಂದ್ ಹೇಳಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್‌ ನಿಂದ ಆಯೋಜಿಸಿದ್ದ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಮಾತನಾಡಿ, ಸಾಧಕರನ್ನು ಗುರುತಸಿ ಸನ್ಮಾನ ಮಾಡುವುದು ನಿಜವಾಗಿಯೂ ಅನನ್ಯ ಮತ್ತು ಅರ್ಥಪೂರ್ಣ. ನಾವು ಯಾವುದೇ ಒಂದು ಕಾರ್ಯಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ನಿರಂತರ ಪರಿಶ್ರಮ ಮತ್ತು ಪ್ರಯತ್ನ ಮುಖ್ಯ. ಈ ಸಾಧಕರನ್ನು ನಾವು ಸಮಾಜಕ್ಕೆ ಪರಿಚಯಿಸುವುದರ ಮೂಲಕ ಲಕ್ಷಾಂತರ ಜನಕ್ಕೆ ಪ್ರೇರಣೆ ಸಿಗುತ್ತದೆ. ಒಳ್ಳೆಯ ಸಮಾಜಮುಖಿಕಾರ್ಯಕ್ರಮ. ಸಾಧಕರನ್ನು ಗುರುತಿಸಿ ಗೌರವಿಸಿ ಮೂಲಕ ಅವರ ಸೇವೆ ಹೆಚ್ಚಾಗುವಂತೆ ಮಾಡುವ ಕಾರ್ಯ ಶ್ಲಾಘನೀಯ ಎಂದು ತಿಳಿಸಿದರು.

ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ನಲ್ಲಿ ಜಿಲ್ಲಾ ಗವರ್ನರ್ ಅವರ ಸಾರ್ವಜನಿಕ ಸಮಾರಂಭದಲ್ಲಿ ವಿವಿಧ ಕ್ಷೇತ್ರದ ಸಾಧಕರಿಗೆ ಸನ್ಮಾನಿಸ ಲಾಯಿತು. ರೋಟರಿ ಕ್ಲಬ್ ಶಿಮೊಗ್ಗ ಸೆಂಟ್ರಲ್ ಹೆಮ್ಮೆಯ ಸದಸ್ಯೆ, ಮಾಜಿ ಉಪಮೇಯರ್ ಸುರೇಖಾ ಮುರುಳಿ ಧರ್ ಅವರು ಸೀನಿಯರ್ ಜೆಸಿಐ ರಾಷ್ಟ್ರೀಯ ಉಪಾಧ್ಯಕ್ಷರಾಗಿ ಆಯ್ಕೆ ಆಗಿರುವುದು ಮತ್ತು ಅವರ ಸಾಮಾಜಿಕ ಸೇವೆಗಳನ್ನು ಗುರುತಿಸಿ ಸನ್ಮಾನಿಸಲಾಯಿತು.

ಸಾಧಕ ಅಂತರರಾಷ್ಟ್ರೀಯ ಈಜುಗಾರ ಮೋತಿನಾಯಕ್ ಅವರನ್ನು ಸನ್ಮಾನಿಸ ಲಾಯಿತು. ಮುಖ್ಯಶಿಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದು ಅನೇಕ ವಿದ್ಯಾರ್ಥಿ ಗಳಿಗೆ ಸಹಾಯ ಹಸ್ತ ನೀಡಿದ್ದಾರೆ. ಇನ್ನೋರ್ವ ಸಾಧಕಿ ಕವಿನಾ ಅವರು ರಾಷ್ಟ್ರೀಯ ಕುಸ್ತಿ ಪಟು, ರಾಜ್ಯ ಮಟ್ಟ ದಲ್ಲಿ ಚಿನ್ನ ಗೆದ್ದ ಸಾಧನೆ ಹಾಗೂ ನಮ್ಮ ಶಿವಮೊಗ್ಗದ ಹೆಮ್ಮೆಯ ಮಗಳು ಅವರನ್ನು ಸನ್ಮಾನಿಸಲಾಯಿತು 
ಕಾರ್ಯಕ್ರಮದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಶಿವಮೊಗ್ಗ ಸೆಂಟ್ರಲ್ ಅಧ್ಯಕ್ಷ ಕಿರಣ್ ಕುಮಾರ್ ವಹಿಸಿದ್ದರು. ವಲಯ ಸಹಾಯಕ ಗವರ್ನರ್ ಸುರೇಶ್ ಎಚ್.ಎಂ. ಮತ್ತು ಕಾರ್ಯದರ್ಶಿ ಈಶ್ವರ್ ಉಪಸ್ಥಿತರಿದ್ದರು.

 ಮಾಜಿ ಜಿಲ್ಲಾ ಗವರ್ನರ್ ಜೆ ಎನ್ ಪ್ರಕಾಶ್ ಮತ್ತು ಚಂದ್ರಶೇಖರ್, ಮಾಜಿ ಸಹಾಯಕ ಗವರ್ನರ್ ರವಿ ಕೊಟೋಜಿ, ಚೂಡಾಮಣಿ ಪವಾರ್, ಆನಂದ್ ಎಸ್ ಜಿ , ವಿಜಯ ಕುಮಾರ್ ಜಿ, ವಲಯ ಮತ್ತು ಜಿಲ್ಲಾ ಎಲ್ಲಾ ನಾಯಕರು, ಎಲ್ಲಾ ಕ್ಲಬ್ಬಿನ ಅಧ್ಯಕ್ಷರು, ಕಾರ್ಯದರ್ಶಿ ಹಾಗೂ ಸದಸ್ಯರಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು