ಭದ್ರಾವತಿ-ನಾಳೆ ಈ ಭಾಗಗಳಲ್ಲಿ ಕರೆಂಟ್ ಇರಲ್ಲ..?

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ಮೆಸ್ಕಾಂ ನಗರ ಉಪ ವಿಭಾಗ, ಘಟಕ-1 ರ ಶಾಖೆಯ ವ್ಯಾಪ್ತಿಯಲ್ಲಿನ ವಿದ್ಯುತ್ ಮಾರ್ಗಗಳ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದ ರಿಂದ ಏ:07 ರ ಸೋಮವಾರ ಬೆಳಿಗ್ಗೆ 9.30 ಘಂಟೆ ಯಿಂದ ಸಂಜೆ 5.30 ಘಂಟೆವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದು ಸಹಾಯಕ ಇಂಜಿನಿಯ‌ರ್(ವಿ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜೆ.ಪಿ.ಎಸ್ ಕಾಲೋನಿ, ಕಾಗದ ನಗರ, ಉಜ್ಜನೀಪುರ, ದೊಡ್ಡಗೊಪ್ಪೇನಹಳ್ಳಿ, ಸುತ್ತ ಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಯಾಗಲಿದೆ ಗ್ರಾಹಕರು ಸಹಕರಿಸಲು ಕೋರಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು