ವಿಐಎಸ್ ಎಲ್ ಕಾರ್ಖಾನೆ ವತಿಯಿಂದ ಕೌಶಲ್ಯ ಅಭಿವೃದ್ಧಿಗೆ ಒತ್ತು ನೀಡುವ ಕಲಿಕೆ

ವಿಜಯ ಸಂಘರ್ಷ ನ್ಯೂಸ್ 
ಭದ್ರಾವತಿ: ನಗರದ ವಿಐಎಸ್ ಎಲ್ ಕಾರ್ಖಾನೆ ವತಿಯಿಂದ ಕೌಶಲ್ಯ ಅಭಿವೃದ್ಧಿಗೆ ಒತ್ತು ನೀಡುವ ನಿಟ್ಟಿನಲ್ಲಿ ಕಲಿಕೆ, ತೊಡಗಿಸಿ ಕೊಳ್ಳಿವಿಕೆ, ವರ್ತನೆ ಮತ್ತು ಕಾರ್ಯಕ್ಷಮತೆ (ಲೀಪ್) ಮೂಲಕ ವೈಯಕ್ತಿಕ ಪರಿಣಾಮ ಕಾರಿತ್ವ ಅಭಿವೃದ್ಧಿ' ಎಂಬ ವಿಷಯ ಕುರಿತು ಎರಡು ತರಬೇತಿ ಕಾರ್ಯಕ್ರಮ ಗಳನ್ನು ಏ:15 ರಿಂದ ಏ :18 ರವರೆಗೆ ವಿಐಎಎಲ್‌ನ ಭದ್ರಾ ಅತಿಥಿಗೃಹದಲ್ಲಿ ಆಯೋಜಿಸಲಾಗಿತ್ತು.

ಪ್ರತ್ಯೇಕವಾಗಿ 43 ಮತ್ತು 36 ಉದ್ಯೋಗಿಗಳನ್ನು ಒಳಗೊಂಡಂತೆ ಆಯೋಜಿಸಲಾಗಿತ್ತು. ಮೊದಲ ತರಬೇತಿ ಕಾರ್ಯಕ್ರಮ ಕಾರ್ಖಾನೆಯ ಕಾರ್ಯಪಾಲಕ ನಿರ್ದೇಶಕ ಬಿ.ಎಲ್. ಚಂದ್ವಾನಿ ಮತ್ತು ಎರಡನೇ ತರಬೇತಿ ಕಾರ್ಯಕ್ರಮ ಮುಖ್ಯಮಹಾ ಪ್ರಬಂಧಕ (ಸ್ಥಾವರ) ಕೆ.ಎಸ್ ಸುರೇಶ್ ಉದ್ಘಾಟಿಸಿದರು.

ರಾಂಚಿಯ ಮ್ಯಾನೇಜ್‌ಮೆಂಟ್ ಟ್ರೈನಿಂಗ್ ಇನ್ಸಿಟ್ಯೂಟ್ ಜನರಲ್ ಮ್ಯಾನೇಜ‌ರ್ (ಶೈಕ್ಷಣಿಕ ಮತ್ತು ಹಿರಿಯ ಬೋಧಕ ಸದಸ್ಯರು) ಡಾ.ಪ್ರಣವ್ ಕುಮಾರ್, ತರಬೇತಿಯನ್ನು ಪರಿಣಾಮಕಾರಿಯಾಗಿ ನಡೆಸಿ ಕೊಟ್ಟರು. ತರಬೇತಿ ಗುಂಪು ಚಟುವಟಿಕೆಗಳು, ಮನಶಾಸ್ತ್ರದ ಪರೀಕ್ಷೆಗಳು, ಗುಂಪು ಚರ್ಚೆ ಮತ್ತು ವಿಷಯ ಮಂಡನೆಗಳು ಒಳಗೊಂಡಿತ್ತು.

ತರಬೇತಿ ಕಾರ್ಯಕ್ರಮ ಕಾರ್ಖಾನೆಯ ಸಾರ್ವಜನಿಕ ಸಂಪರ್ಕ ಇಲಾಖೆ ಸಹಯೋಗದೊಂದಿಗೆ ಕೈಗೊಳ್ಳ ಲಾಗಿತ್ತು. ಕಿರಿಯ ಪ್ರಬಂಧಕ (ಎಚ್.ಆರ್, ಎಚ್.ಆರ್ ಎಲ್ &ಡಿ) ಎಮ್.ಎಲ್. ಯೋಗೀಶ್ ಪ್ರೋಟೋ ಕಾಲ್ ಅಧಿಕಾರಿಯಾಗಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು