ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ರಾಜ್ಯ ಸರಕಾರಿ ನೌಕರರ
ಸಂಘದ ಆಶ್ರಿತ ವಿಶ್ವೇಶ್ವರಾಯ ವಿದ್ಯಾ ಸಂಸ್ಥೆಯಲ್ಲಿಡಾ:ಬಿ.ಆರ್.ಅಂಬೇಡ್ಕರ್ ಜಾನಪದ ಕಲಾ ಸಂಘದ ಆಶ್ರಯ ದಲ್ಲಿ ಬಿಇಡಿ ವಿಭಾಗದ ಪ್ರಶಿಕ್ಷಣಾರ್ಥಿ ಗಳಿಗಾಗಿ ನಾಟಕ ಪ್ರದರ್ಶನ ಮತ್ತು ರಂಗ ಸಂವಾದ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ವಿದ್ಯಾ ಸಂಸ್ಥೆಯ ಆಡಳಿತಾಧಿಕಾರಿ ಡಾ.ಎಸ್.ಪಿ. ರಾಕೇಶ್ ತಮಟೆ ಬಾರಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು.
ಜಾನಪದ ಕಲಾ ಸಂಘದ ಪ್ರಧಾನ ಕಾರ್ಯದರ್ಶಿ ತಮಟೆ ಜಗದೀಶ್, ಹಿರಿಯ ಕಲಾವಿದರಾದ ಕೆ.ಎಸ್. ರವಿಕುಮಾರ್, ವೈ.ಕೆ.ಹನುಮಂತಯ್ಯ, ಬಿ.ಪ್ರವೀಣ್ ಕುಮಾರ್, ದಿವಾಕರ್, ರತ್ನ, ಶಿಕ್ಷಕರ ವರ್ಗ ನೂರಕ್ಕೂ ಹೆಚ್ಚು ಪ್ರಶಿಕ್ಷಣಾರ್ಥಿಗಳು ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ನಾಟಕದ ಅಭಿನಯ ಮಾಡಿದ ಕಲಾವಿದೆ ಇಂದು ಡಿ.ನೀನಾಸಂ ಅವರನ್ನು ಗೌರವಿಸಲಾಯಿತು.
ಕಡೇಯಲ್ಲಿ ರಂಗ ಭೂಮಿಯ ಕಲೆಯ ಗೀಳು, ಕಲೆಯ ಉಳಿವು, ಯುವ ಸಮೂಹದಪಾತ್ರ, ಜಾನಪದ ಅಳಿವು ಉಳಿವು, ನಾಟಕದಲ್ಲಿನ ಕೆಲ ವಿಚಾರಗಳ ಕುರಿತು ಶಿಕ್ಷಣಾರ್ಥಿಗಳು ಕೇಳಿದ ಪ್ರಶ್ನೆಗಳಿಗೆ ಒಡಲಾಳ ನಾಟಕದ ಪ್ರಮುಖ ಸಾಕವ್ವನ ಪಾತ್ರದಾರಿ ಭದ್ರಾವತಿ ರಂಗ ಕಲಾವಿದೆ ಡಿ.ನೀನಾಸಂ ಮತ್ತು ತಮಟೆ ಜಗದೀಶ್ ಉತ್ತರಿಸಿದರು.
ನಾಟಕದ ಸಾರಾಂಶ, ದಲಿತ ಕವಿ ದೇವನೂರ್ ಮಹಾದೇವ ರವರ ಕಾದಂಬರಿ 'ಒಡಲಾಳ' ಆಯ್ದ ಭಾಗದ ನಾಟಕದಲ್ಲಿ, ಊರಿಗೆ ಹೊಸದಾಗಿ ಆಗಮಿಸಿದ ಪೊಲೀಸ್ ಅಧಿಕಾರಿಗೆ ಊರಿನ ಗೌಡನೋರ್ವ ಭಕ್ಷ್ಯಭೋಜನ ಮಾಡಿಸಲು ಕೋಳಿ ವೊಂದನ್ನು ಕದ್ದು ಅಡಿಗೆ ಮಾಡಿಸಿ ತಿನ್ನಿಸುತ್ತಾನೆ.
ಕೆಳ ವರ್ಗದ ಬಡವಿ ಸಾಕವ್ವನಿಗೆ ಸೇರಿದ ಕೋಳಿ ತಿಂದು ತೇಗಿದ ಉಳ್ಳವರ ಮತ್ತು ಅದರಿಂದ ಕೋಳಿಯ ಒಡತಿ ಸಾಕವ್ವ ನಿಗಾಗುವ ಅನ್ಯಾಯ, ದಮನಿತರ ಶೋಷಿತ ವರ್ಗದ ಬೆಳಕು ಚೆಲ್ಲುವ ಹಾಗೂ ಪೊಲೀಸರ ದರ್ಪ ಉಳ್ಳವರ ಅಟ್ಟಹಾಸ ಚಿತ್ರಣದ ಆಯ್ದ ಭಾಗದ ತಿರುಳನ್ನು ಬಲು ತೀಕ್ಷವಾಗಿ ತೆರೆದಿಡುವಲ್ಲಿ ಸಾಕವ್ವನ ಪಾತ್ರ ನೋಡುಗರಿಗೆ ಮನಸೂರೆಗೊಂಡಿತು.
Tags
ಭದ್ರಾವತಿ ಒಡಲಾಳ ನಾಟಕ