ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ಕಲಾ ಕ್ಷೇತ್ರದಲ್ಲಿ ಚಲನ ಚಿತ್ರ ಹಾಗೂ ಧಾರವಾಹಿಗಳಿಗೆ ಸಂಭಾಷಣೆಯನ್ನು ಬರೆಯುವುದರಲ್ಲಿ ಪ್ರಮುಖ ಪಾತ್ರ ವಹಿಸಿದ ಹೆಚ್ಎಸ್ ವೆಂಕಟೇಶ್ ಮೂರ್ತಿಯವರ ಕಲಾ ಸೇವೆ ಮರೆಯವಂತಿಲ್ಲ ಅವರ ಕವನ ಕವಿತೆಗಳು ಇಂದಿಗೂ ಸಹ ಪ್ರಸ್ತುತ ಎಲ್ಲಾ ವರ್ಗದವರಿಗೂ ಸಹ ವಿಶೇಷ ಕವನಗಳನ್ನು ರಚಿಸುವುದರ ಸುಗಮ ಸಂಗೀತ ಕ್ಷೇತ್ರವನ್ನು ಸದೃಢಗೊಳಿಸಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ. ಎಂದು ಸುಗಮ ಸಂಗೀತ ಪರಿಷತ್ತಿನ ನಿರ್ದೇಶಕರು ಹಾಗೂ ಆಕಾಶವಾಣಿ ಕಲಾವಿದರಾದ ಜಯಶ್ರೀ ಶ್ರೀಧರ್ ಅವರು ಅಭಿಮತ ವ್ಯಕ್ತಪಡಿಸಿದರು.
ಅವರು ಇಂದು ನಗರದ ಮಧುರ ಪ್ಯಾರಡೈಸ್ ಸಭಾಂಗಣದಲ್ಲಿ ಕರ್ನಾಟಕ ಸುಗಮ ಸಂಗೀತ ಪರಿಷತ್ ಚಿರಂತನ ಯೋಗ ಮತ್ತು ಸಂಗೀತ ಟ್ರಸ್ಟ್. ಭಾವಗಾನ, ನಾದಶ್ರೀ ಸುಗಮ ಸಂಗೀತ ಶಾಲೆ. ಹಾಗೂ ತರಂಗಿಣಿ ಸಂಗೀತ ಶಾಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ಇಂದು ಕೀರ್ತಿಶೇಶ ಕವಿ ಡಾ:ಎಚ್.ಎಸ್ ವೆಂಕಟೇಶ್ ಮೂರ್ತಿ ಯವರ. ನಾಲ್ಕು ದಿನದ ಬಾಳಿಗೆ ಇರಲಿ ಹಾಲು ಹೋಳಿಗೆ. ನುಡಿಗಾನ ನಮನ ಕಾರ್ಯಕ್ರಮ ವನ್ನು ಎಚ್ ಎಸ್ ವಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮುಖಾಂತರ ಉದ್ಘಾಟಿಸಿದರು.
ಬಾವಗಾನ ಸಂಸ್ಥೆಯ ಅಧ್ಯಕ್ಷ ಭದ್ರಾವತಿ ವಾಸು ಮಾತನಾಡಿ ಹೆಚ್ ಎಸ್ ವಿ ಅವರು. ಈ ನಾಡು ಕಂಡ ಒಬ್ಬ ಶ್ರೇಷ್ಠ ಕವಿ ಅವರ ಲೋಕದ ಕಣ್ಣಿಗೆ ರಾಧೆಯು ಕೂಡ. ಸಾವಿರದಳ ಕಮಲಿನಿ ಹಾಗೆ ಹಲವಾರು ಭಾವಗೀತೆ ಗಳು ಇಂದಿಗೂ ಸಹ ಜೀವನಂತಿಕೆ ಯಿಂದ ಇದೆ ಎಂದು ನುಡಿದರು.
ಕರ್ನಾಟಕ ಸೋಮ ಸಂಗೀತ ಪರಿಷತ್ತಿನ ಜಿಲ್ಲಾ ಘಟಕದ ಖಜಾಂಚಿ ದಿ ವಿಜಯ್ ಕುಮಾರ್ ಮಾತನಾಡಿ ಸುಗಮ ಸಂಗೀತ ಕ್ಷೇತ್ರ ಗಟ್ಟಿಗೊಳ್ಳಲು ಇಂತಹ ಕವಿಗಳು ಸಾಧಕರು ಬಹಳ ಮುಖ್ಯ ಇವರ ಕಥೆ ಕವನ ಹಾಗೂ ನಾಟಕಗಳು ರಾಜ್ಯ ರಾಷ್ಟ್ರಮಟ್ಟ ದಲ್ಲೂ ಸಹ ವಿಶೇಷ ಸ್ಥಾನಮಾನವನ್ನ ಪಡೆದಿದೆ ಸುಗಮ ಸಂಗೀತ ಕ್ಷೇತ್ರಕ್ಕೆ ಸಲ್ಲಿಸಿದ ಸೇವೆ ನಾವು ಮರೆಯಲು ಸಾಧ್ಯವೇ ಇಲ್ಲ ಎಂದರು.
ಸುಗಮ ಸಂಗೀತ ಪರಿಷತ್ತಿನ ಕಲಾವಿದರು ಭಾವಗಾನ ತಂಡದ ಕಲಾವಿದರು ಹಾಗೂ ಎಲ್ಲಾ ಸಂಗೀತ ಪಾಠಶಾಲೆಯ ಕಲಾವಿದರು ಎಚ್ ಎಸ್ ವಿ ಅವರ ಕವಿತೆಗಳನ್ನು ಹಾಡಿ ಮನತಣಿಸಿದರು.
ವೇದಿಕೆಯಲ್ಲಿ ಸಂಚಾಲಕರಾದ ಶೋಭಾ ಸತೀಶ್. ಭುಜಂಗಪ್ಪ. ಕಾರ್ಯದರ್ಶಿ ಮಥುರಾ ನಾಗರಾಜ್. ಬಸವರಾಜ್. ಲಲಿತಮ್ಮ. ವಿಜಯ ಕುಮಾರ್ ಮತ್ತು ಪರಿಷತ್ತಿನ ಕಲಾವಿದರು ನಿರ್ದೇಶಕರು ಸದಸ್ಯರು ಉಪಸ್ಥಿತರಿದ್ದರು.
Tags
ಶಿವಮೊಗ್ಗ ವರದಿ