ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗಗಳ ವಿಭಾಗಕ್ಕೆ ನೂತನವಾಗಿ ನೇಮಕವಾಗಿರುವ ಎಂ.ರಮೇಶ್ ಶಂಕರಘಟ್ಟ ಇವರನ್ನು ಭದ್ರಾವತಿಯ ನಗರ ಹಾಗೂ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ವತಿಯಿಂದ ಸನ್ಮಾನಿಸಲಾಯಿತು.
ನಗರದ ಕಾಂಚನ ಹೋಟೆಲ್ನಲ್ಲಿ ನಡೆದ ಪಕ್ಷದ ಜಂಟಿ ಕಾರ್ಯಕರ್ತರ ಸಭೆಯಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದ ರಮೇಶ್ ಕ್ಷೇತ್ರದ ಸರ್ವಾಂಗೀಣಾಭಿವೃದ್ದಿಗೆ ಶ್ರಮಿಸುತ್ತಿ ರುವ ಶಾಸಕ ಬಿ.ಕೆ.ಸಂಗಮೇಶ್ವರ್ ಇವರ ಕೈ ಬಲಪಡಿಸುವುದರ ಮೂಲಕ ತಾಲ್ಲೂಕಿನಲ್ಲಿ ಕಾಂಗ್ರೆಸ್ ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಲು ಶ್ರಮಿಸ ಬೇಕೆಂದು ಕರೆ ನೀಡಿದರು.
ಪ್ರತಿ ತಿಂಗಳು ಕೊನೆಯ ವಾರದಲ್ಲಿ ಕಾರ್ಯಕರ್ತರ ಸಭೆಯನ್ನು ಏರ್ಪಡಿಸಿ ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಿ ಪರಿಹಾರ ಕಂಡುಕೊಳ್ಳುತಿರುವುದು ಶ್ಲಾಘನೀಯ ಕಾರ್ಯ. ಇದಕ್ಕಾಗಿ ಇಬ್ಬರು ಬ್ಲಾಕ್ ಅಧ್ಯಕ್ಷರುಗಳನ್ನು ಅಭಿನಂದಿಸುವುದಾಗಿ ತಿಳಿಸಿದರು.
ಗ್ರಾಮಾಂತರ ಬ್ಲಾಕ್ ಅಧ್ಯಕ್ಷ ಎಚ್.ಎಲ್ ಷಡಾಕ್ಷರಿ ಮಾತನಾಡಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರನ್ನಾಗಿ ರಮೇಶ್ ಇವರನ್ನು ನೇಮಿಸಿರುವುದು ತಾಲ್ಲೂಕಿಗೆ ಹೆಮ್ಮೆಯ ವಿಚಾರ ಎಂದರು.
ನಗರ ಅಧ್ಯಕ್ಷ ಎಸ್.ಕುಮಾರ್ ಮಾತನಾಡಿ ಮುಂದಿನ ದಿನಗಳಲ್ಲಿ ಕಾರ್ಯಕರ್ತರಿಗೆ ತರಬೇತಿ ಕಾರ್ಯಾ ಗಾರ ಆಯೋಜಿಸಿ ಮುಂದಿನ ಚುನಾವಣೆಗಳಿಗೆ ಅವರನ್ನು ಸಜ್ಜುಗೊಳಿಸಲಾಗುತ್ತಿದೆ. ಇದಕ್ಕೆ ಹಿಂದುಳಿದ ವರ್ಗಗಳ ವಿಭಾಗದ ಸಹಕಾರವು ಅಗತ್ಯವೆಂದರು.
ಕಾರ್ಯಕ್ರಮದಲ್ಲಿ ನಗರಸಭಾ ಸದಸ್ಯರಾದ ಚಿನ್ನಪ್ಪ, ನಗರ ಹಿಂದುಳಿದ ವರ್ಗಗಳ ಅಧ್ಯಕ್ಷ ಗಂಗಾಧರ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಮೀರ್ ಜಾನ್, ಎಸ್.ಸಿ.ಘಟಕದ ಅಧ್ಯಕ್ಷ ಈಶ್ವರಪ್ಪ, ಎಸ್ ಟಿ ಘಟಕದ ಅಧ್ಯಕ್ಷರಾದ ಲಕ್ಷ್ಮೀದೇವಮ್ಮ, ಕಾರ್ಯದರ್ಶಿ ಜಯಪ್ಪ, ಜುಂಜಪ್ಪ, ಶಶಿಕುಮಾರ್, ಪ್ರಕಾಶ್ ತಳ್ಳಿಕಟ್ಟೆ ಮತ್ತಿತರರಿದ್ದರು.