ವಿಜಯ ಸಂಘರ್ಷ ನ್ಯೂಸ್
ಶಿವಮೊಗ್ಗ: ರಾಜ್ಯದ ವಿವಿಧೆಡೆ 12 ಅಧಿಕಾರಿ ಗಳ ಮನೆಗಳ ಮೇಲೆ ಮಂಗಳವಾರ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ದಾವಣಗೆರೆ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಯೊಬ್ಬರ ಶಿವಮೊಗ್ಗದ ಮನೆ ಮೇಲೆ ದಾಳಿ ನಡೆಸಿದೆ.
ದಾವಣಗೆರೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತದ ಎಇಇ ಜಗದೀಶ್ ನಾಯ್ಕ್ ಅವರ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಶಿವಮೊಗ್ಗದ ಸವಳಂಗ ರಸ್ತೆಯ ಶಿವಬಸವ ನಗರದ ಇಂದಿರಾ ಗಾಂಧಿ ಬಡಾವಣೆಯಲ್ಲಿ ರುವ ಅವರ ಮನೆ ಮೇಲು ದಾಳಿಯಾಗಿದೆ.
ದಾವಣಗೆರೆಯಿಂದ ಎರಡು ಜೀಪು ಗಳಲ್ಲಿ ಆಗಮಿಸಿರುವ ಲೋಕಾಯುಕ್ತ ಅಧಿಕಾರಿಗಳ ದಾಳಿಯಲ್ಲಿ ಪಾಲ್ಗೊಂಡಿದ್ದಾರೆ.
Tags
ಶಿವಮೊಗ್ಗ ಲೋಕ ರೈಡ್