ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಶಿವಮೊಗ್ಗ ಶಂಕರ ಕಣ್ಣಿನ ಆಸ್ಪತ್ರೆ, ಮತ್ತು VISL ಆಸ್ಪತ್ರೆಯ ಸಹಯೋಗದೊಂದಿಗೆ ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯಲ್ಲಿ ಉಚಿತ ನೇತ್ರ ತಪಾಸಣಾ ಶಿಬಿರ ಬುಧವಾರ ಆಯೋಜಿಸಲಾಗಿತ್ತು.
ಶಿಬಿರದಲ್ಲಿ ಶಂಕರ ಕಣ್ಣಿನ ಆಸ್ಪತ್ರೆ ತಜ್ಞ ವೈದ್ಯೆ ಡಾ॥ ಮೇಘನ, ನೇತ್ರ ತಜ್ಞರಾದ ಹರ್ಷ, ಸೋಮೇಶ್,ಚೇತನ, ವಿಐಎಸ್ಎಲ್ನಿಂದ ಅಲೆನ್ ಪಿಂಟೋ, ಪುಷ್ಪಲತಾ, ಮೋಹನ್, ನವೀನ್, ಉಮೇಶ್,ರಮೇಶ್, ಎಮ್.ಎಲ್.ಯೋಗೀಶ್, ಕಿರಿಯ ಅಧಿಕಾರಿ (ಮಾನವ ಸಂಪನ್ಮೂಲ) ಸಹಕಾರ ನೀಡಿದರು.
ವಿಐಎಸ್ಎಲ್ನ ಮಾನವ ಸಂಪನ್ಮೂಲ ಇಲಾಖೆ, ಆಸ್ಪತ್ರೆ ಇಲಾಖೆ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳು ಈ ಶಿಬಿರವನ್ನು ಸಂಯೋಜಿಸಿದ್ದವು. ಈ ವಿಐಎಸ್ ಎಲ್ ಆಸ್ಪತ್ರೆಯ ಹೆಚ್ಚುವರಿ ಮುಖ್ಯ ವೈಧ್ಯಾಧಿಕಾರಿ ಡಾ॥ ಸುಜೀತ್ ಕುಮಾರ್, ಮಹಾಪ್ರಬಂಧಕರು (ಹೆಚ್. ಆರ್ ಮತ್ತು ಸಾರ್ವಜನಿಕ ಸಂಪರ್ಕ) ಎಲ್. ಪ್ರವೀಣ್ ಕುಮಾರ್ ಕಾರ್ಯಕ್ರಮದ ಆಯೋಜನೆಯ ಮೇಲುಸ್ತುವಾರಿ ವಹಿಸಿದ್ದರು.
143 ಕ್ಕೂ ಹೆಚ್ಚು ಸಂಖ್ಯೆಯ ಕಾರ್ಮಿಕರು ಮತ್ತು ಗುತ್ತಿಗೆ ಕಾರ್ಮಿಕರು ಶಿಬಿರದ ಸೌಲಭ್ಯ ಪಡೆದರು.
ಶಿಬಿರದಲ್ಲಿ ರಕ್ತದೊತ್ತಡ (ಬಿಪಿ) ತಪಾಸಣೆ, GRBS (ಮಧುಮೇಹ) ತಪಾಸಣೆ, ಟಿಟ್ಸ್ಸ್ ಕಣ್ಣಿನ ತಪಾಸಣೆ (ಸಮೀಪ ದೃಷ್ಟಿ, ದೂರ ದೃಷ್ಟಿ, ಬಣ್ಣ ದೃಷ್ಟಿ, ಬೈನಾಕುಲರ್ ಮೌಲ್ಯಮಾಪನ ಮತ್ತು ಟ್ರಯಲ್ ಸೆಟ್ /ವಕ್ರೀಭವನ ತಪಾಸಣೆ ಸೇರಿದಂತೆ ವಿವಿಧ ತಪಾಸಣೆ ಮಾಡಲಾಯಿತು.