ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ಹಲ್ಲೆ ಹಾಗೂ ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರಿಗೆ 2 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಭದ್ರಾವತಿಯ 4 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ತಾಲೂಕು ಆನವೇರಿ ಗ್ರಾಮದ ಕುರುಬರ ಬೀದಿಯ ನಿವಾಸಿಗಳಾದ ರಾಜಪ್ಪ ಈ ಬಿ (51), ಭರತ್ ಈ ಆರ್ (20), ರಂಗನಾಥ್ ಯಾನೆ ರಂಗೇಶ್ (34) ಹಾಗೂ ಹನುಮಂತಪ್ಪ (53) ಜೈಲು ಶಿಕ್ಷೆಗೆ ಗುರಿಯಾದವರೆಂದು ಗುರುತಿಸಲಾಗಿದೆ.
ಜೈಲು ಶಿಕ್ಷೆಯ ಜೊತೆಗೆ 77,000 ರೂ. ದಂಡ ವಿಧಿಸಲಾಗಿದೆ. ತಪ್ಪಿದ್ದಲ್ಲಿ ಹೆಚ್ಚುವರಿಯಾಗಿ 1 ತಿಂಗಳ ಸಾದಾ ಜೈಲು ಶಿಕ್ಷೆ ಸಜೆ ಅನುಭವಿ ಸುವಂತೆ ಹಾಗೂ ದಂಡ ಮೊತ್ತದಲ್ಲಿ 2 ಲಕ್ಷ ರೂ.ಗಳನ್ನು ನೊಂದವರಿಗೆ ನೀಡು ವಂತೆ ನ್ಯಾಯಾಧೀಶರಾದ ಇಂದಿರಾ ಮೈಲಸ್ವಾಮಿ ಚೆಟ್ಟಿಯಾರ್ ಅವರು 30/10/2025 ರಂದು ಈ ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ರತ್ನಮ್ಮ ಪಿ ಅವರು ವಾದ ಮಂಡಿಸಿದ್ದರು.
ಪ್ರಕರಣದ ಹಿನ್ನೆಲೆ : 13-11-2022 ರಂದು ತಾಲ್ಲೂಕಿನ ಆನವೇರಿ ಗ್ರಾಮದ ತಿಮ್ಮಪ್ಪ ರವರೊಂದಿಗೆ ಆಸ್ತಿಯ ವಿಚಾರವಾಗಿ ಪ್ರಸ್ತುತ ಶಿಕ್ಷೆಗೊಳಗಾದ ನಾಲ್ವರು ವ್ಯಕ್ತಿಗಳು ಜಗಳ ಮಾಡಿ ದ್ದರು. ತಿಮ್ಮಪ್ಪರ ಮೇಲೆ ಖಾರದ ಪುಡಿ ಎರಚಿ ಹಲ್ಲೆ ಮಾಡ ಲಾಗಿತ್ತು. ಜಾತಿ ನಿಂದನೆಯ ಆರೋಪವಿತ್ತು.
ಈ ಸಂಬಂಧ ಹೊಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಐಪಿಸಿಯ ಹೊಳೆಹೊನ್ನೂರು ಪೊಲೀಸ್ ಠಾಣೆ ಗುನ್ನೆ ನಂ 320/2022 ಕಲಂ 143, 147, 148, 504, 323, 324, 506, 149 ಐಪಿಸಿ ಮತ್ತು ಎಸ್.ಸಿ/ಎಸ್.ಟಿ ಕಾಯಿದೆ ರೀತ್ಯಾ ಪ್ರಕರಣ ದಾಖಲಾಗಿ ರುತ್ತದೆ. ಅಂದಿನ ಎಎಸ್ಪಿ ಜೀತೇಂದ್ರ ಕುಮಾರ ದಯಾಮರವರು ಪ್ರಕರಣದ ತನಿಖೆ ನಡೆಸಿದ್ದರು.