ವಿಜಯ ಸಂಘರ್ಷ ನ್ಯೂಸ್
ಭದ್ರಾವತಿ: ತಾಲ್ಲೂಕಿನ ಗ್ರಾಮಾಂತರ ಭಾಗದ ಉಕ್ಕುಂದ ಮತ್ತು ಸುತ್ತಮುತ್ತ ಲಿನ ಗ್ರಾಮಗಳಿಗೆ ಬಿ.ಎಸ್.ಎನ್.ಎಲ್ ಟವರ್ ನಿರ್ಮಿಸಬೇಕೆಂದು ಒತ್ತಾಯಿಸಿ ಶನಿವಾರ ಕಿರಿಯ ತಾಂತ್ರಿಕ ಅಧಿಕಾರಿ ಸುರೇಶ್ ರವರಿಗೆ ಮನವಿ ಸಲ್ಲಿಸಲಾಯಿತು.
ಬಿಜೆಪಿ ಗ್ರಾಮಾಂತರ ಅಧ್ಯಕ್ಷ ಕೆ.ಎಚ್ ತೀರ್ಥಯ್ಯ, ರಾಜಣ್ಣ, ಪಕ್ಷದ ಮುಖಂಡ ಮಂಗೋಟೆ ರುದ್ರೇಶ್, ನಗರ ಪ್ರಧಾನ ಕಾರ್ಯದರ್ಶಿ ರಘುರಾವ್, ಹಿರಿಯೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಬಾರಂದೂರು ಪ್ರಸನ್ನ, ಕಾಗದ ನಗರ ಮಹಾ ಶಕ್ತಿ ಕೇಂದ್ರದ ಅಧ್ಯಕ್ಷ ಅಶೋಕ್ ಮತ್ತು ಹೊಸಮನೆ ಹರೀಶ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.